Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:25 - ಕನ್ನಡ ಸತ್ಯವೇದವು C.L. Bible (BSI)

25 ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಜನರು, ‘ಈ ದೇಶದವರ ಪೂರ್ವಿಕರ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿದ ಮೇಲೆ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಜನರು - ಈ ದೇಶದವರ ಪಿತೃಗಳ ದೇವರಾದ ಯೆಹೋವನು ಅವರನ್ನು ಐಗುಪ್ತದೇಶದಿಂದ ಬಿಡಿಸಿ ಅವರೊಡನೆ ಮಾಡಿದ ನಿಬಂಧನೆಯನ್ನು ಅವರು ಉಲ್ಲಂಘಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯಾಕೆಂದರೆ ‘ಇಸ್ರೇಲರು ತಮ್ಮ ಪೂರ್ವಿಕರ ದೇವರಾದ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಬಿಟ್ಟು ತೊಲಗಿದರು. ಅವರನ್ನು ಈಜಿಪ್ಟಿನಿಂದ ಹೊರತರುವಾಗ ಯೆಹೋವನೊಂದಿಗೆ ಮಾಡಿದ ಒಡಂಬಡಿಕೆಯನ್ನು ಅನುಸರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:25
20 ತಿಳಿವುಗಳ ಹೋಲಿಕೆ  

ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.


ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು.


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.


ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.


ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.


ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ I ಉರುಲಾದವು ಆ ವಿಗ್ರಹಗಳೆ ಅವರಿಗೆ II


ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.


ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು