Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:28 - ಕನ್ನಡ ಸತ್ಯವೇದವು C.L. Bible (BSI)

28 ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ, ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನು’ ಎಂದು ಉತ್ತರ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಮಹಾಕೋಪೋದ್ರೇಕದಿಂದ ಆ ಜನರನ್ನು ದೇಶದಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರದಲ್ಲಿ ಹಾಕಿಬಿಟ್ಟನೆಂದು ಉತ್ತರಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:28
24 ತಿಳಿವುಗಳ ಹೋಲಿಕೆ  

ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.


ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.


‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.


“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.


ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.


ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು