Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:15 - ಕನ್ನಡ ಸತ್ಯವೇದವು C.L. Bible (BSI)

15 “ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೋಡಿರಿ, ಈಗ ನಾನು ಜೀವ ಮತ್ತು ಶುಭಗಳನ್ನೂ ಹಾಗೂ ಮರಣ ಮತ್ತು ಅಶುಭಗಳನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೋಡಿರಿ; ನಾನು ಜೀವಶುಭಗಳನ್ನೂ ಮರಣಾಶುಭಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಈ ದಿನ ನೀವು ಜೀವ ಮತ್ತು ಮರಣ; ಶುಭ ಮತ್ತು ಅಶುಭ ಇವುಗಳನ್ನು ಆಯ್ಕೆಮಾಡಿಕೊಳ್ಳಲು ನಿಮಗೆ ಅವಕಾಶ ಮಾಡಿಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:15
18 ತಿಳಿವುಗಳ ಹೋಲಿಕೆ  

“ಇಗೋ ನೋಡಿ, ಈ ದಿನ ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.


“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.


ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.


ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.


ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು