Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:16 - ಕನ್ನಡ ಸತ್ಯವೇದವು C.L. Bible (BSI)

16 ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ, ಆತನು ಹೇಳಿದ ಮಾರ್ಗದಲ್ಲಿ ನಡೆದು, ಆತನ ಆಜ್ಞಾವಿಧಿ ನಿಯಮಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಈಗ ನಿಮಗೆ ಬೋಧಿಸುವ ಪ್ರಕಾರ ನೀವು ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನು ಹೇಳಿದ ಮಾರ್ಗದಲ್ಲಿ ನಡೆದು ಆತನ ಆಜ್ಞಾವಿಧಿ ನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚುವಿರಿ; ಮತ್ತು ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಅಭಿವೃದ್ಧಿಪಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮ್ಮ ದೇವರಾದ ಯೆಹೋವನನ್ನು ನೀವು ಸಂಪೂರ್ಣವಾಗಿ ಪ್ರೀತಿಸಬೇಕೆಂದು ಆಜ್ಞಾಪಿಸುತ್ತೇನೆ. ಆತನ ಆಜ್ಞೆಗಳಿಗೆ, ನಿಯಮಗಳಿಗೆ ಮತ್ತು ವಿಧಿಗಳಿಗೆ ವಿಧೇಯರಾಗಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ. ಆಗ ನೀವು ಬದುಕುವಿರಿ ಮತ್ತು ನಿಮ್ಮ ಜನಾಂಗ ದೊಡ್ಡದಾಗಿ ಬೆಳೆಯುವುದು. ನಿಮಗಾಗಿ ತೆಗೆದುಕೊಳ್ಳಲು ಪ್ರವೇಶಿಸಲಿರುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:16
15 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.


ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”


ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.


“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,


ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;


ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.


ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು