Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:17 - ಕನ್ನಡ ಸತ್ಯವೇದವು C.L. Bible (BSI)

17 ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ, ಇತರ ದೇವರುಗಳನ್ನು ಪೂಜಿಸಿ, ಸೇವಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ನೀವು ಆತನನ್ನು ಬಿಟ್ಟು ಆತನ ಮಾತನ್ನು ಕೇಳಲೊಲ್ಲದೆ ಮರುಳುಗೊಂಡವರಾಗಿ ಇತರ ದೇವರುಗಳನ್ನು ಪೂಜಿಸಿ ಸೇವಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ನೀವು ಯೆಹೋವನಿಗೆ ವಿಮುಖರಾಗಿ ಆತನಿಗೆ ಕಿವಿಗೊಡದೆ ಹೋದರೆ, ಬೇರೆ ದೇವರುಗಳನ್ನು ಆರಾಧಿಸಲು ಮತ್ತು ಸೇವೆಮಾಡಲು ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:17
16 ತಿಳಿವುಗಳ ಹೋಲಿಕೆ  

ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.


ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.


ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.


ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.


ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.


ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.


ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.


ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,


ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,


ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು