Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 30:3 - ಕನ್ನಡ ಸತ್ಯವೇದವು C.L. Bible (BSI)

3 ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ನಿಮ್ಮನ್ನು ಕನಿಕರಿಸಿ ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ತಿರಿಗಿ ಕೂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ದೇವರಾದ ಯೆಹೋವನು ನಿಮ್ಮ ಮೇಲೆ ದಯೆ ತೋರಿಸುವನು. ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿ ಎಲ್ಲಿ ಚದರಿಸಲ್ಪಟ್ಟಿದ್ದೀರೋ ಅಲ್ಲಿಂದ ತಿರುಗಿ ಹಿಂದಕ್ಕೆ ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 30:3
33 ತಿಳಿವುಗಳ ಹೋಲಿಕೆ  

ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’


ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.


ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.


ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.


ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.


ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.


ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.


ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.


ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.


ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.


ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,


ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.


ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II


ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.


ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).


ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II


ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.


“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.


ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.


“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.


ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;


ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.


ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು