Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:14 - ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಮೋಶೆಗೆ, “ನೀನು ಸಾಯಬೇಕಾದ ದಿನಗಳು ಸಮೀಪವಾದವು, ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು” ಎಂದು ಹೇಳಿದನು. ಆಗ ಮೋಶೆ ಮತ್ತು ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಮೋಶೆಗೆ - ನೀನು ಸಾಯಬೇಕಾದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು ದೇವದರ್ಶನದ ಗುಡಾರದಲ್ಲಿ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು ಎಂದು ಆಜ್ಞಾಪಿಸಲಾಗಿ ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:14
29 ತಿಳಿವುಗಳ ಹೋಲಿಕೆ  

ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.


ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.


ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.


ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.


ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.


ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.


ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.


“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.


ಬೆಳಿಗ್ಗೆ ನೀನು ಸಿದ್ಧವಾಗಿದ್ದು, ಸೀನಾಯಿ ಬೆಟ್ಟವನ್ನು ಹತ್ತಿ, ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರು.


ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.


ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.


ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು.


ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ.


ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು.


ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.


ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:


ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.


ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.


ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು