Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:27 - ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯಾಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರುದ್ಧವಾಗಿ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪುನಃ ಬೀಳುವುದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:27
18 ತಿಳಿವುಗಳ ಹೋಲಿಕೆ  

ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.


ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.


ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.


ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II


ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.


“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;


ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.


ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.


ಆದರೂ ಪಾಪಮಾಡುತ್ತಲೆ ಬಂದರು ದೇವರಿಗೆದುರಾಗಿ I ಪ್ರತಿಭಟಿಸಿದರು ಅಡವಿಯಲಿ ಪರಾತ್ಪರನಿಗೆ ವಿರುದ್ಧವಾಗಿ II


ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,


ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.


“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು