Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:9 - ಕನ್ನಡ ಸತ್ಯವೇದವು C.L. Bible (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:9
29 ತಿಳಿವುಗಳ ಹೋಲಿಕೆ  

ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.


“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.


ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.


ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?


“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.


‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.


ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.


ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.


ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.


“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.


ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.


ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.


ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.


“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.


ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.


ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು.


ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು