Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:14 - ಕನ್ನಡ ಸತ್ಯವೇದವು C.L. Bible (BSI)

14 ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಹಾರಕ್ಕಾಗಿ ಆಕಳಿನ ಮೊಸರು, ಆಡು ಕುರಿಗಳ ಹಾಲು, ಕೊಬ್ಬಿದ ಕುರಿ ಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಮತ್ತು ಪಾನಕ್ಕಾಗಿ ದ್ರಾಕ್ಷಿಯರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಹಾರಕ್ಕಾಗಿ ಆಕಳಿನ ಮೊಸರು, ಆಡುಕುರಿಗಳ ಹಾಲು, ಕೊಬ್ಬಿದ ಕುರಿಟಗರುಗಳ ಮಾಂಸವು, ಬಾಷಾನ್ ಸೀಮೆಯ ಉತ್ತಮಪಶುಗಳು, ಹೋತಗಳು, ಶ್ರೇಷ್ಠವಾದ ಗೋದಿ ಇವುಗಳನ್ನೂ ಪಾನಕ್ಕಾಗಿ ದ್ರಾಕ್ಷೆಯ ರಕ್ತರಸವನ್ನೂ ಕೊಟ್ಟದ್ದೂ; ಇದನ್ನೆಲ್ಲಾ ನೆನಪಿಗೆ ತಂದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಇಸ್ರೇಲಿಗೆ ಹಿಂಡಿನಿಂದ ಬೆಣ್ಣೆಯನ್ನೂ ಹಾಲನ್ನೂ ಕೊಟ್ಟನು. ಆತನು ಕೊಬ್ಬಿದ ಕುರಿಮರಿಗಳನ್ನೂ ಆಡುಗಳನ್ನೂ ಬಾಷಾನಿನ ಅತ್ಯುತ್ತಮವಾದ ಟಗರುಗಳನ್ನೂ ಕೊಟ್ಟನು. ಜೊತೆಗೆ ಉತ್ತಮವಾದ ಗೋಧಿಯನ್ನೂ ಕೊಟ್ಟನು. ಇಸ್ರೇಲಿನ ಜನರು ಕೆಂಪು ದ್ರಾಕ್ಷಿಯಿಂದ ಮಾಡಿದ ಉತ್ತಮ ದ್ರಾಕ್ಷಾರಸವನ್ನು ಕುಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:14
22 ತಿಳಿವುಗಳ ಹೋಲಿಕೆ  

ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.


ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II


“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.


ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.


ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.


ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು.


ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು.


ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.


“ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.


ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.


“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.


ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು