Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:2 - ಕನ್ನಡ ಸತ್ಯವೇದವು C.L. Bible (BSI)

2 ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ ತಣ್ಣಗಿರುವುದು; ನನ್ನ ಬೋಧನೆಯು ಮಂಜಿನಂತೆಯೂ ಮತ್ತು ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ ಹಿತವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ಉಪದೇಶವು ಹಸಿಹುಲ್ಲಿನ ಮೇಲೆ ಮೆಲ್ಲಗೆ ಸುರಿಯುವ ಮಳೆಯ ತುಂತುರುಗಳಂತೆ [ತಣ್ಣಗಿರುವದು;] ನನ್ನ ಬೋಧನೆಯು ಮಂಜಿನಂತೆಯೂ ಕಾಯಿಪಲ್ಯಗಳ ಮೇಲೆ ಬೀಳುವ ಹದಮಳೆಯಂತೆಯೂ [ಹಿತವಾಗಿರುವದು].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ಬೋಧನೆಯು ಮಳೆಯಂತೆ ಬರುವುದು. ನೆಲದ ಮೇಲೆ ಬೀಳುವ ಇಬ್ಬನಿಯಂತಿರುವುದು; ಮೃದುವಾದ ಹುಲ್ಲಿನ ಮೇಲೆ ಬೀಳುವ ಹದವಾದ ಮಳೆಯಂತಿರುವುದು; ಹಸಿರು ಸಸಿಗಳ ಮೇಲೆ ಬೀಳುವ ಮಳೆಯ ಹನಿಯಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:2
14 ತಿಳಿವುಗಳ ಹೋಲಿಕೆ  

ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II


ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.


ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.


ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.


ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.


ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.


ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.


ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II


ನಾನು ನಿಮಗೆ ನೀಡುವುದು ಸದುಪದೇಶ; ನೀವು ಅದನ್ನು ಕೈಬಿಡಬೇಡಿ.


“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು