Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:23 - ಕನ್ನಡ ಸತ್ಯವೇದವು C.L. Bible (BSI)

23 ‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರುದ್ಧವಾಗಿ ಪ್ರಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರಿಗೆ ಒಂದರ ಮೇಲೊಂದಾಗಿ ವಿಪತ್ತುಗಳನ್ನು ಬರಮಾಡುವೆನು; ನನ್ನ ಎಲ್ಲಾ ಬಾಣಗಳನ್ನೂ ಅವರಿಗೆ ವಿರೋಧವಾಗಿ ಪ್ರಯೋಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “‘ನಾನು ಇಸ್ರೇಲಿಗೆ ಸಂಕಟವನ್ನು ಬರಮಾಡುವೆನು. ನನ್ನ ಬಾಣಗಳನ್ನೆಲ್ಲಾ ಅದಕ್ಕೆ ಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:23
19 ತಿಳಿವುಗಳ ಹೋಲಿಕೆ  

ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!


ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.


“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.


ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.


ಚದರಿಸಿದನು ಶತ್ರುಗಳನು ಬಾಣಗಳನೆಸೆದು ತಳಮಳಗೊಳಿಸಿದನವರನು ಸಿಡಿಲನು ಹೊಡೆದು.


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.


ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II


ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು