Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:25 - ಕನ್ನಡ ಸತ್ಯವೇದವು C.L. Bible (BSI)

25 ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮನೆಯ ಹೊರಗೆ ಕತ್ತಿಯೂ, ಒಳಗೆ ಭಯವೂ ಇರುವುದು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮನೆಯ ಹೊರಗೆ ಕತ್ತಿಯೂ ಒಳಗೆ ಭಯವೂ ಇರುವವು. ಯೌವನಸ್ಥರು, ಕನ್ಯೆಯರು, ಮೊಲೆಕೂಸುಗಳು, ನರೇತಲೆಯವರು ಇವರೆಲ್ಲರೂ ಕತ್ತಿಯಿಂದ ಕೊಲ್ಲಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ರಸ್ತೆಗಳಲ್ಲಿ ಸಿಪಾಯಿಗಳು ಅವರನ್ನು ಕೊಲ್ಲುವರು. ಅವರ ಮನೆಗಳಲ್ಲಿ ಭಯಂಕರ ಸಂಗತಿಗಳು ನಡೆಯುವವು. ಯುವಕಯುವತಿಯರನ್ನೂ ಸಿಪಾಯಿಗಳು ಕೊಲ್ಲುವರು, ಮುದುಕರನ್ನೂ ಎಳೆಗೂಸುಗಳನ್ನೂ ಸಂಹರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:25
17 ತಿಳಿವುಗಳ ಹೋಲಿಕೆ  

“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.


ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”


ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.


ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು