Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:39 - ಕನ್ನಡ ಸತ್ಯವೇದವು C.L. Bible (BSI)

39 “ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ಹೊರತು ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಹಾಗೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ಮತ್ತು ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸಲು ಶಕ್ತನು ಯಾವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನೇ, ನಾನೊಬ್ಬನೇ ದೇವರಾಗಿರಲಾಗಿ ನನ್ನ ವಿನಾ ಯಾವ ದೇವರೂ ಇಲ್ಲವೆಂದು ಈಗಲಾದರೂ ತಿಳಿದುಕೊಳ್ಳಿರಿ. ಬದುಕಿಸುವವನೂ ಕೊಲ್ಲುವವನೂ ನಾನೇ; ಗಾಯಪಡಿಸುವವನೂ ವಾಸಿಮಾಡುವವನೂ ನಾನೇ; ನನ್ನ ಕೈಯಿಂದ ತಪ್ಪಿಸ ಶಕ್ತನು ಯಾವನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “‘ನಾನೇ ದೇವರು, ನನ್ನ ಹೊರತು ಬೇರೆ ದೇವರಿಲ್ಲ. ಜನರಿಗೆ ಮರಣವನ್ನೂ ಜೀವವನ್ನೂ ಕೊಡುವವನು ನಾನೇ. ಅವರಿಗೆ ಗಾಯ ಮಾಡುವವನೂ ನಾನೇ, ಅದನ್ನು ಗುಣಮಾಡುವವನೂ ನಾನೇ. ನನ್ನ ಶಕ್ತಿಯ ಹಿಡಿತದಿಂದ ಇನ್ನೊಬ್ಬನನ್ನು ರಕ್ಷಿಸಲು ಯಾರಿಗೂ ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:39
41 ತಿಳಿವುಗಳ ಹೋಲಿಕೆ  

ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.


ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.


ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;


ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II


ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.


ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II


ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.


ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.


ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:


ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.


“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.


ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.


ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.


ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”


ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.


ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.


ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ.


ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II


ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II


ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II


ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.


ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.


ಇಂತೆನ್ನುತ್ತಾರೆ ಸರ್ವೇಶ್ವರ : “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.


ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.


ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.


ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.


ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು