Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:40 - ಕನ್ನಡ ಸತ್ಯವೇದವು C.L. Bible (BSI)

40 ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬುದು ಎಷ್ಟು ನಿಶ್ಚಯ ಎಂದು ಖಂಡಿತವಾಗಿ ಪ್ರಮಾಣಮಾಡುವೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬದು ಎಷ್ಟು ನಿಶ್ಚಯವೋ ಅಷ್ಟು ಖಂಡಿತವಾಗಿ ಪ್ರಮಾಣಮಾಡುವೆನು; ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಕೈಗಳನ್ನು ಆಕಾಶದ ಕಡೆಗೆತ್ತಿ ವಚನ ಕೊಡುತ್ತೇನೆ. ನಾನು ನಿತ್ಯಕಾಲಕ್ಕೆ ಜೀವಿಸುವುದು ಎಷ್ಟು ಸತ್ಯವೋ ಅದೇರೀತಿ ಇವೆಲ್ಲವೂ ನೆರವೇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:40
19 ತಿಳಿವುಗಳ ಹೋಲಿಕೆ  

ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”


ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.


ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.


ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II


ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.


ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;


ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.


ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.


ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು