Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:9 - ಕನ್ನಡ ಸತ್ಯವೇದವು C.L. Bible (BSI)

9 ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲರು ಮಾತ್ರ ಯೆಹೋವನ ಸ್ವಂತ ಜನರಾದರು. ಯಾಕೋಬನ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲ್ಯರು ಮಾತ್ರ ಯೆಹೋವನ ಸ್ವಂತ ಜನರಾದದ್ದೂ; ಯಾಕೋಬ್ ವಂಶಸ್ಥರು ಆತನಿಗೆ ಸ್ವಕೀಯ ಪ್ರಜೆಯಾದದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನ ಪಾಲು ಆತನ ಜನರೇ. ಇಸ್ರೇಲನ ವಂಶಸ್ಥರು ದೇವಜನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:9
28 ತಿಳಿವುಗಳ ಹೋಲಿಕೆ  

ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.


ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.


ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”


ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II


ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.


ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.


ಅರಸರು ತಮ್ಮ ಸೇವಕಿಯಾದ ನನ್ನ ಬಿನ್ನಹವನ್ನು ಆಲಿಸಿ, ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದು ಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ, ತಪ್ಪಿಸಿ ರಕ್ಷಿಸುವಿರೆಂದು ನಂಬಿಕೊಂಡಿದ್ದೇನೆ.


ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II


ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.


ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.


ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.


ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.


ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.


ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು