Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:28 - ಕನ್ನಡ ಸತ್ಯವೇದವು C.L. Bible (BSI)

28 ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಆದಕಾರಣ ಇಸ್ರಾಯೇಲ್ಯರು ಆಕಾಶದಿಂದ ಮಂಜು ಸುರಿದು ಧಾನ್ಯವೂ ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬ್‍ಸಂಭವರು ಸುರಕ್ಷಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:28
26 ತಿಳಿವುಗಳ ಹೋಲಿಕೆ  

ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,


ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.


ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.


ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.


ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.


ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.


“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.


ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು : “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;


ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.


ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.


ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.


ಆಗ ಇಸಾಕನು - "ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.


ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.


ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.


ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.


ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;


ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.


ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು