Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:5 - ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ಕುಲಗಳು ಒಂದಾದಾಗ ಜನನಾಯಕರು ಒಟ್ಟಾಗಿ ಕೂಡಿದಾಗ ಯೆಶುರೂನಿನಲಿ ಸರ್ವೇಶ್ವರನೇ ಅರಸನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರ ಕುಲಗಳು ಅವರ ಅಧಿಪತಿಗಳೊಡನೆ ಒಟ್ಟಾಗಿ ಸೇರಿಬಂದಾಗ ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರ ಅಧಿಪತಿಗಳು ಕುಲಗಳವರೊಡನೆ ಒಟ್ಟಾಗಿ ಕೂಡಿದಾಗ [ಯೆಹೋವನು] ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ ಅರಸನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರ ಮುಖ್ಯಸ್ಥರೂ ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:5
12 ತಿಳಿವುಗಳ ಹೋಲಿಕೆ  

“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.


“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.


ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು.


ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!


ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.


ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.


ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:


ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.


ಯುಗಯುಗಾಂತರಕ್ಕೂ ರಾಜ್ಯವಾಳುವವನು ಸರ್ವೇಶ್ವರನೇ!


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು