Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:7 - ಕನ್ನಡ ಸತ್ಯವೇದವು C.L. Bible (BSI)

7 ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಯೆಹೂದ ಕುಲದ ವಿಷಯದಲ್ಲಿ, ‘ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ರಕ್ಷಿಸು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ ಕುಲದ ವಿಷಯದಲ್ಲಿ ಹೀಗಂದನು - ಯೆಹೋವನೇ, ಯೆಹೂದ ಕುಲದವರ ಮೊರೆಯನ್ನು ಲಾಲಿಸಿ ಅವರನ್ನು ಅವರ ಬಂಧುಗಳೊಡನೆ ಸೇರಿಸು. ಅವರಿಗೋಸ್ಕರ ಯುದ್ಧಮಾಡಿದರಲ್ಲಾ; ಅವರ ಶತ್ರುಗಳಿಂದ ಅವರನ್ನು ತಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು. ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:7
28 ತಿಳಿವುಗಳ ಹೋಲಿಕೆ  

ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.


ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II


ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II


ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II


ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.


ಆರಿಸಿಕೊಂಡನು ದಾಸ ದಾವೀದನನು I ತೆಗೆದುಕೊಂಡನು ಕುರಿಹಟ್ಟಿಯಿಂದವನನು II


ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ದಾವೀದನ ಸೈನ್ಯಕ್ಕೆ ಪ್ರತಿದಿನವೂ ಹೊಸಬರು ಬಂದು ಸೇರುತ್ತಾ ಇದ್ದುದರಿಂದ ಅವನ ಸೈನ್ಯವು ಸಂಖ್ಯೆಯಲ್ಲಿ ಅಧಿಕಾಧಿಕವಾಗಿ ಬೆಳೆಯಿತು.


ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.


ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.


ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;


ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,


ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ:


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು