Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:8 - ಕನ್ನಡ ಸತ್ಯವೇದವು C.L. Bible (BSI)

8 ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಲೇವಿಕುಲದ ವಿಷಯದಲ್ಲಿ ಹೀಗಂದನು - [ಯೆಹೋವನೇ,] ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು. ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:8
25 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.


ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.


ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.


ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II


ವಕ್ಷಪದಕವನ್ನು ಅವನಿಗೆ ಬಿಗಿಸಿ, ಅದರ ಚೀಲದೊಳಗೆ ಊರೀಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಹಾಕಿ


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.


“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II


ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.


ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.


ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.


ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.


ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.


ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.


“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.


“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.


“ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.


ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.


ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.”


“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು