Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 34:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮರಣ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಮಾತಿನಂತೆ ಆತನ ಸೇವಕನಾದ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ದೇಹಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 34:5
13 ತಿಳಿವುಗಳ ಹೋಲಿಕೆ  

ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:


ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”


ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.


ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.


ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು