Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:12 - ಕನ್ನಡ ಸತ್ಯವೇದವು C.L. Bible (BSI)

12 ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದನು. ಆತನು ಮಾತನಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸಲ್ಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಆ ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತಾಡಿದ್ದೂ; ಮಾತಾಡಿದ ಸ್ವರ ನಿಮಗೆ ಕೇಳಿಸಿತೇ ಹೊರತು ಯಾವ ಆಕಾರವೂ ಕಾಣಿಸದೆ ಹೋದದ್ದೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಬೆಂಕಿಯೊಳಗಿಂದ ಯೆಹೋವನು ಮಾತನಾಡಿದನು. ಅದು ಯಾರೋ ಮಾತಾಡಿದಂತಿತ್ತು, ಆದರೆ ನೀವು ಯಾರನ್ನೂ ಕಾಣಲಿಲ್ಲ. ನೀವು ಸ್ವರವನ್ನು ಮಾತ್ರ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:12
24 ತಿಳಿವುಗಳ ಹೋಲಿಕೆ  

“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.


ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಮ್ಮೊಂದಿಗೆ ಮಾತಾಡಿದರು.


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.


ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.


ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,


“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.


ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?


ಆ ವಾಣಿ ಮತ್ತೆ ಕೇಳಿಸಿತು : ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು : “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.


ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.


ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.


ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.


ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.


ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.


ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.


ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.


ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.


ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು