Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:27 - ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಜನ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೆಹೋವನು ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸುವನು; ಆತನು ನಿಮ್ಮನ್ನು ಓಡಿಸುವ ದೇಶಗಳ ಜನರ ಮಧ್ಯದಲ್ಲಿ ನೀವು ಸ್ವಲ್ಪ ಮಂದಿ ಮಾತ್ರ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯೆಹೋವನು ನಿಮ್ಮನ್ನು ಅನ್ಯದೇಶಗಳಿಗೆ ಚದರಿಸಿಬಿಡುವನು. ಆತನು ನಿಮ್ಮನ್ನು ಚದರಿಸಿಬಿಡುವ ದೇಶಗಳವರ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಮಾತ್ರ ಜೀವಂತವಾಗಿ ಉಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:27
23 ತಿಳಿವುಗಳ ಹೋಲಿಕೆ  

ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.


“ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ?


“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.


ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.


ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.


ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.


ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II


ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I


ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.


ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".


ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.


ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”


ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.


ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II


“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.


ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು