Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:36 - ಕನ್ನಡ ಸತ್ಯವೇದವು C.L. Bible (BSI)

36 ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ತನ್ನ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ತೋರಿಸಿದನು. ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಆತನು ನಿಮ್ಮ ಶಿಕ್ಷಣಕ್ಕೋಸ್ಕರ ಆಕಾಶದಿಂದ ತನ್ನ ಸ್ವರವನ್ನು ನಿಮಗೆ ಕೇಳಿಸುವಂತೆ ಮಾಡಿದನು; ಮತ್ತು ಭೂವಿುಯ ಮೇಲೆ ತಾನಿದ್ದ ಮಹಾ ಅಗ್ನಿಜ್ವಾಲೆಯನ್ನು ನೋಡಿಸಿದನು; ಅದಲ್ಲದೆ ಆ ಅಗ್ನಿಜ್ವಾಲೆಯೊಳಗಿಂದ ಆತನು ಆಡಿದ ಮಾತುಗಳನ್ನು ಕೇಳಿಸುವಂತೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಕಾಶದಿಂದ ಆತನ ಮಾತುಗಳನ್ನು ನೀವು ಕೇಳುವಂತೆ ಮಾಡಿದನು; ಭೂಮಿಯ ಮೇಲೆ ಒಂದು ದೊಡ್ಡ ಬೆಂಕಿಯನ್ನು ನೋಡುವಂತೆ ಮಾಡಿದನು; ಮತ್ತು ಅದರೊಳಗಿಂದ ನಿಮ್ಮೊಡನೆ ಮಾತನಾಡಿದನು. ನಿಮಗೆ ಪಾಠಗಳನ್ನು ಕಲಿಸುವುದಕ್ಕಾಗಿ ಇವೆಲ್ಲವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:36
12 ತಿಳಿವುಗಳ ಹೋಲಿಕೆ  

ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.


ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.


ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.


ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;


ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.


ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.


“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು