Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 4:37 - ಕನ್ನಡ ಸತ್ಯವೇದವು C.L. Bible (BSI)

37 ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆತನು ನಿಮ್ಮ ಪೂರ್ವಿಕರನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನು ಆರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆತನು ನಿಮ್ಮ ಪಿತೃಗಳನ್ನು ಪ್ರೀತಿಸಿ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೂ ಆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ದೇವರಾದ ಯೆಹೋವನು ನಿಮ್ಮ ಪೂರ್ವಿಕರನ್ನು ಪ್ರೀತಿಸಿದ್ದರಿಂದ ನಿಮ್ಮನ್ನು ಆರಿಸಿಕೊಂಡನು. ಆತನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಹೊರತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 4:37
32 ತಿಳಿವುಗಳ ಹೋಲಿಕೆ  

ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.


ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?


ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.


ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.


ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು : “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.


ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.


ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.


ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.


ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.


ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು