Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:24 - ಕನ್ನಡ ಸತ್ಯವೇದವು C.L. Bible (BSI)

24 ‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ‘ನಮ್ಮ ದೇವರಾದ ಯೆಹೋವನು ತನ್ನ ಮಹಿಮೆಯನ್ನೂ ಪ್ರತಾಪವನ್ನೂ ನಮಗೆ ತೋರಿಸಿದ್ದಾನೆ. ಬೆಂಕಿಯೊಳಗಿಂದ ಆತನು ಮಾತನಾಡಿದ್ದನ್ನು ನಾವು ಕೇಳಿದ್ದೇವೆ. ದೇವರು ಒಬ್ಬನೊಡನೆ ಸ್ವತಃ ಮಾತನಾಡಿದ ಬಳಿಕವೂ ಅವನು ಜೀವದಿಂದುಳಿಯಲು ಸಾಧ್ಯ ಎಂಬುದನ್ನು ನಾವು ಕಣ್ಣಾರೆ ಕಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:24
12 ತಿಳಿವುಗಳ ಹೋಲಿಕೆ  

ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?


ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.


ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.


ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.


ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.


ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.


“ಆ ಬೆಟ್ಟ ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ, ಆ ಕತ್ತಲೊಳಗಿಂದ ದೇವರ ಸ್ವರ ಕೇಳಿ ಬಂದಾಗ, ನೀವು, ನಿಮ್ಮ ಕುಲಾಧಿಪತಿಗಳು, ಹಿರಿಯರು ನನ್ನ ಬಳಿಗೆ ಬಂದಿರಿ.


ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.


ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.


ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.


ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು