Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:25 - ಕನ್ನಡ ಸತ್ಯವೇದವು C.L. Bible (BSI)

25 ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿಬಿಟ್ಟೀತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರಿಗಿ ಕೇಳಿದರೆ ಸತ್ತೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನಮ್ಮ ದೇವರಾದ ಯೆಹೋವನು ಮಾತನಾಡುವುದನ್ನು ನಾವು ಮತ್ತೆ ಕೇಳಿದರೆ ಖಂಡಿತವಾಗಿ ಸಾಯುವೆವು. ಆ ಭಯಂಕರವಾದ ಬೆಂಕಿಯು ನಮ್ಮನ್ನು ದಹಿಸುವುದು. ನಮಗೆ ಸಾಯಲು ಇಷ್ಟವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:25
12 ತಿಳಿವುಗಳ ಹೋಲಿಕೆ  

ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.


ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.


ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.


ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.


ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.


ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.


‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.


ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು