ಧರ್ಮೋಪದೇಶಕಾಂಡ 6:18 - ಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನ ದೃಷ್ಟಿಗೆ ಯಾವುದು ನ್ಯಾಯವೂ ಮತ್ತು ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವುದು, ಮತ್ತು ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನ ದೃಷ್ಟಿಗೆ ಯಾವದು ನ್ಯಾಯವೂ ಯೋಗ್ಯವೂ ಆಗಿದೆಯೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭವುಂಟಾಗುವದು, ಮತ್ತು ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮದೇಶವನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ. ಅಧ್ಯಾಯವನ್ನು ನೋಡಿ |
ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.