Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:20 - ಕನ್ನಡ ಸತ್ಯವೇದವು C.L. Bible (BSI)

20 “ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಇನ್ನು ಮುಂದೆ ನಿಮ್ಮ ಮಕ್ಕಳು - ಈ ಆಜ್ಞಾವಿಧಿ ನಿರ್ಣಯಗಳನ್ನು ನಮ್ಮ ದೇವರಾದ ಯೆಹೋವನು ಯಾತಕ್ಕೆ ನೇವಿುಸಿದನು ಎಂದು ವಿಚಾರಿಸುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:20
12 ತಿಳಿವುಗಳ ಹೋಲಿಕೆ  

ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.


ಮುಂದಕ್ಕೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ವಿಧಿಯ ಅರ್ಥವೇನು?’ ಎಂದು ಕೇಳಿದಾಗ ನೀವು ಅವರಿಗೆ,


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.


ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ಅಲ್ಲದೆ, ಅವರೇ ಮಾತುಕೊಟ್ಟಿರುವಂತೆ ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆಯೇ ತೊಲಗಿಸುವರು.


ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;


ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II


ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು