Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:25 - ಕನ್ನಡ ಸತ್ಯವೇದವು C.L. Bible (BSI)

25 ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿಸಲು ಯೋಗ್ಯರಾಗುವೆವು” ಎಂಬುದಾಗಿ ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:25
13 ತಿಳಿವುಗಳ ಹೋಲಿಕೆ  

ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.


ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.


ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.


ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.


ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.


ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು