Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:1 - ಕನ್ನಡ ಸತ್ಯವೇದವು C.L. Bible (BSI)

1 “ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿ ಅಭಿವೃದ್ಧಿಹೊಂದುವಿರಿ, ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬದುಕಿಕೊಂಡು ಹೆಚ್ಚಿ ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ದೇಶವನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ನಾನು ಈ ದಿನ ಕೊಡುವ ಎಲ್ಲಾ ಆಜ್ಞೆಗಳನ್ನು ನೀವು ಅನುಸರಿಸಬೇಕು. ಆಗ ನೀವು ದೊಡ್ಡ ಜನಾಂಗವಾಗಿ ಅಭಿವೃದ್ಧಿಯಾಗುವಿರಿ. ನಿಮ್ಮ ಪೂರ್ವಿಕರಿಗೆ ಯೆಹೋವನು ವಾಗ್ದಾನ ಮಾಡಿದ ದೇಶವನ್ನು ನೀವು ಪಡೆದುಕೊಳ್ಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:1
9 ತಿಳಿವುಗಳ ಹೋಲಿಕೆ  

“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.


ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.


ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು