Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:14 - ಕನ್ನಡ ಸತ್ಯವೇದವು C.L. Bible (BSI)

14 ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ ಒಂದು ವೇಳೆ ನೀವು ಅಹಂಕಾರದಿಂದ ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಟ್ಟೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಗ ನೀವು ಹೆಮ್ಮೆಯಿಂದ ಸೊಕ್ಕಿನ ಕಣ್ಣುಳ್ಳವರಾಗಿರಬೇಡಿ. ನಿಮ್ಮ ದೇವರಾದ ಯೆಹೋವನನ್ನು ಮರೆತುಬಿಡಬೇಡಿರಿ. ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಾಗ ಆತನು ನಿಮ್ಮನ್ನು ಬಿಡಿಸಿ ಸ್ವತಂತ್ರರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:14
22 ತಿಳಿವುಗಳ ಹೋಲಿಕೆ  

ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II


ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.


“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.


ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ : ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.


ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.


ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.


ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,


ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,


ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.


ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.


‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.


ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.


“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.


ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.


ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.


ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.


ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು