Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 8:17 - ಕನ್ನಡ ಸತ್ಯವೇದವು C.L. Bible (BSI)

17 ‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ಮನಸ್ಸಿನೊಳಗೆ, “ಈ ಭಾಗ್ಯವು ನಮ್ಮ ಸಾಮರ್ಥ್ಯ ಮತ್ತು ಸಾಹಸಗಳಿಂದಲೇ ನಮಗುಂಟಾಯಿತು” ಎಂದು ಅಂದುಕೊಂಡೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಭಾಗ್ಯವು ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗುಂಟಾಯಿತು ಅಂದುಕೊಂಡೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ‘ಇವೆಲ್ಲಾ ನಾವೇ ಸಂಪಾದಿಸಿದ್ದು, ನಮ್ಮ ಶಕ್ತಿಸಾಮರ್ಥ್ಯಗಳಿಂದ ಇವುಗಳನ್ನು ನಾವು ಪಡೆದೆವು’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 8:17
17 ತಿಳಿವುಗಳ ಹೋಲಿಕೆ  

“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.


ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”


‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?


ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.


ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.


ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.


ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.


ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”


ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು