ಧರ್ಮೋಪದೇಶಕಾಂಡ 8:8 - ಕನ್ನಡ ಸತ್ಯವೇದವು C.L. Bible (BSI)8 ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷೆ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಜೇನೂ ಸಿಕ್ಕುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ದೇಶವು ಗೋಧಿ, ಜವೆಗೋಧಿ, ದ್ರಾಕ್ಷಾಲತೆಗಳು, ಅಂಜೂರ, ದಾಳಿಂಬೆ ಮರಗಳಿಂದ ತುಂಬಿದೆ. ಅಲ್ಲಿ ಎಣ್ಣೆ, ಜೇನುತುಪ್ಪ ಧಾರಾಳವಾಗಿ ಸಿಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ. ಅಧ್ಯಾಯವನ್ನು ನೋಡಿ |
ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.