Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 1:12 - ಕನ್ನಡ ಸತ್ಯವೇದವು C.L. Bible (BSI)

12 ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ನಿನ್ನ ಶತ್ರುಗಳು ಎಷ್ಟು ಪ್ರಬಲರಾಗಿದ್ದರೂ ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು, ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಇನ್ನು ಬಾಧಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಯೆಹೂದನಿಗೆ ಇಂತೆಂದೆನು: “ಅಶ್ಶೂರದ ಜನರು ಬಲಶಾಲಿಗಳು. ಅವರಲ್ಲಿ ಅಸಂಖ್ಯಾತ ಸೈನಿಕರಿದ್ದಾರೆ. ಆದರೆ ಅವರೆಲ್ಲಾ ತುಂಡರಿಸಲ್ಪಡುವರು. ಅವರೆಲ್ಲಾ ಹತರಾಗುವರು. ನನ್ನ ಜನರೇ, ನೀವು ಕಷ್ಟ ಅನುಭವಿಸುವಂತೆ ಮಾಡಿದೆನು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 1:12
20 ತಿಳಿವುಗಳ ಹೋಲಿಕೆ  

“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.


ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.


ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!


ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.


ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು : ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.


ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.


ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು !.


ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.


ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.


ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು