Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:4 - ಕನ್ನಡ ಸತ್ಯವೇದವು C.L. Bible (BSI)

4 ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನದಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ವಿುಂಚುಗಳ ಹಾಗೆ ಹಾರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಸ್ತೆಯ ಮೇಲೆ ರಥಗಳು ರಭಸದಿಂದ ಓಡುತ್ತಿವೆ. ನಗರದ ಚೌಕಕ್ಕೆ ಹಿಂದೆ ಮುಂದೆ ಓಡುತ್ತಿವೆ. ಅವು ಉರಿಯುವ ಪಂಜಿನೋಪಾದಿಯಲ್ಲಿವೆ, ಒಂದೆಡೆಯಿಂದ ಇನ್ನೊಂದೆಡೆಗೆ ಹಾರುವ ಮಿಂಚಿನಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ, ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ. ಅವು ಉರಿಯುವ ಪಂಜುಗಳಂತೆ ಕಾಣುತ್ತವೆ; ಅವರು ಮಿಂಚಿನಂತೆ ಸುತ್ತಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:4
10 ತಿಳಿವುಗಳ ಹೋಲಿಕೆ  

ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ ! ಅವನ ಕುದುರೆಗಳು ರಣಹದ್ದುಗಳಂತೆ ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು !


ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.


ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ : ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ


ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.


ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.


ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು