Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:5 - ಕನ್ನಡ ಸತ್ಯವೇದವು C.L. Bible (BSI)

5 ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಪಟ್ಟಣದ] ಅರಸನು ತನ್ನ ಸರದಾರರನ್ನು ಸ್ಮರಿಸುತ್ತಾನೆ; ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆಗೆ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವೈರಿಗಳು ತಮ್ಮ ಶೂರ ಯೋಧರನ್ನು ಕರೆಯುತ್ತಿದ್ದಾರೆ. ಅವರು ಮುನ್ನುಗ್ಗುವಾಗ ಎಡವಿಬೀಳುವರು, ಗೋಡೆಗಳ ಕಡೆಗೆ ನುಗ್ಗಿ ತಮ್ಮ ಗುರಾಣಿಗಳನ್ನು ಇಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ. ಅವರು ತಮ್ಮ ನಡೆಯಲ್ಲಿ ಎಡವುವರು. ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು. ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:5
9 ತಿಳಿವುಗಳ ಹೋಲಿಕೆ  

ನಿನ್ನ ಲಜ್ಜೆಯ ಸುದ್ದಿ ರಾಷ್ಟ್ರಗಳಿಗೆ ಮುಟ್ಟಿದೆ ಲೋಕವೆಲ್ಲಾ ನಿನ್ನ ಗೋಳಾಟದಿಂದ ತುಂಬಿದೆ ಯೋಧನು ಯೋಧನನ್ನು ಎಡವಿ, ಇಬ್ಬರೂ ಬಿದ್ದಿರುವರು ಕೆಳಗೆ.”


“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.


ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ : “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”


ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು.


ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು.


“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು