Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 2:8 - ಕನ್ನಡ ಸತ್ಯವೇದವು C.L. Bible (BSI)

8 ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪುರಾತನಕಾಲದಿಂದ ನಿನೆವೆಯು ನೀರು ತುಂಬಿದ ಕೆರೆಯಂತೆ ಇರುತ್ತದೆ; ಆಹಾ, [ಒಡೆದು ಓಡುವ ನೀರಿನಂತೆ ಅದರ ನಿವಾಸಿಗಳು] ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ [ಎಂದು ಅಪ್ಪಣೆಯಾದರೂ] ಯಾರೂ ಹಿಂದೆ ನೋಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿನೆವೆಯು ನೀರು ಬತ್ತುತ್ತಿರುವ ಕೊಳದಂತಿದೆ. “ನಿಲ್ಲಿ, ನಿಲ್ಲಿ, ಓಡಿಹೋಗಬೇಡಿ” ಎಂದು ಜನರು ಬೊಬ್ಬಿಡುತ್ತಾರೆ. ಆದರೆ ಅದರಿಂದ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 2:8
15 ತಿಳಿವುಗಳ ಹೋಲಿಕೆ  

ಆ ದೇವದೂತನು ಮುಂದುವರೆದು ಹೀಗೆ ನುಡಿದನು : “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.


ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;


ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.


ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.


ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ : “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ".


ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.


“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.


ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ


“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”


ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು