Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:10 - ಕನ್ನಡ ಸತ್ಯವೇದವು C.L. Bible (BSI)

10 ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿ ಬಿಟ್ಟರು; ಅದರ ಪ್ರಮುಖರನ್ನು ಬಂಧಿಸಿ ಚೀಟು ಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೂ ಅದು ಗಡೀಪಾರಾಗಿ ಸೆರೆಹೋಯಿತು; ಅದರ ಮಕ್ಕಳನ್ನು ಪ್ರತಿ ಬೀದಿಯ ಕೊನೆಯಲ್ಲಿ ಬಂಡೆಗೆ ಅಪ್ಪಳಿಸಿಬಿಟ್ಟರು; ಅದರ ಘನವಂತರಿಗೋಸ್ಕರ ಚೀಟುಹಾಕಿದರು, ಅದರ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ತೆಬೆಸ್ ಸೋಲಿಸಲ್ಪಟ್ಟಿತು. ಆಕೆಯ ಪ್ರಜೆಗಳು ಬೇರೆ ದೇಶಕ್ಕೆ ಕೈದಿಗಳಾಗಿ ಒಯ್ಯಲ್ಪಟ್ಟರು. ಸೈನಿಕರು ಆಕೆಯ ಹಸುಗೂಸುಗಳನ್ನು ರಸ್ತೆಯ ಮೂಲೆಮೂಲೆಗಳಲ್ಲಿ ಹೊಡೆದು ಸಾಯಿಸಿದರು. ತಮ್ಮಲ್ಲಿ ಯಾರು ಉನ್ನತ ಅಧಿಕಾರಿಗಳನ್ನು ಗುಲಾಮರನ್ನಾಗಿ ಉಪಯೋಗಿಸಬೇಕೆಂಬದಾಗಿ ಚೀಟುಹಾಕಿದರು. ಅವರು ತೆಬೆಸಿನ ಮುಖ್ಯ ಅಧಿಕಾರಿಗಳನ್ನು ಸಂಕೋಲೆಗಳಿಂದ ಬಂಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:10
17 ತಿಳಿವುಗಳ ಹೋಲಿಕೆ  

ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.


ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.


ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.


ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”


ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.


ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.


ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಬಾಬಿಲೋನ್ ನಗರವೇ ಕೇಳು : ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II


ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.


ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.


ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II


“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”


ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು