Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:11 - ಕನ್ನಡ ಸತ್ಯವೇದವು C.L. Bible (BSI)

11 “ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿಮಿತ್ತ ಆಶ್ರಯವನ್ನು ಹುಡುಕುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿವಿುತ್ತ ಆಶ್ರಯವನ್ನು ಹುಡುಕುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ನಿನೆವೆಯೇ, ನೀನು ಸಹ ಕುಡಿದು ಅಮಲೇರಿದವನಂತೆ ಕೆಳಗೆ ಬಿದ್ದುಬಿಡುವೆ. ನೀನು ಅಡಗಿಕೊಳ್ಳಲು ಪ್ರಯತ್ನಿಸುವೆ. ವೈರಿಯಿಂದ ತಪ್ಪಿಸಿಕೊಳ್ಳಲು ಸುರಕ್ಷಿತವಾದ ಸ್ಥಳವನ್ನು ಹುಡುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:11
19 ತಿಳಿವುಗಳ ಹೋಲಿಕೆ  

ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು : ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.


ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.


ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”


ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II


ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.


ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು