Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:3 - ಕನ್ನಡ ಸತ್ಯವೇದವು C.L. Bible (BSI)

3 ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ರಾಹುತರ ರಭಸ, ಥಳಥಳಿಸುವ ಕತ್ತಿ, ಮಿಂಚುವ ಈಟಿ, ಅಸಂಖ್ಯಾತವಾಗಿ ಹತರಾದ ಸೈನಿಕರ ಶವಗಳ ಮಹಾರಾಶಿ, ಸತ್ತವರು ಲೆಕ್ಕವೇ ಇಲ್ಲ, ನುಗ್ಗುವವರು ಅವರ ಹೆಣಗಳನ್ನು ಎಡವುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ರಾಹುತರ ರಭಸ, ಥಳಥಳಿಸುವ ಕತ್ತಿ, ವಿುಂಚುವ ಈಟಿ, ಅಸಂಖ್ಯಾತ ಹತರು, ಶವಗಳ ಮಹಾರಾಶಿ! ಸತ್ತವರು ಲೆಕ್ಕವೇ ಇಲ್ಲ, [ನುಗ್ಗುವವರು] ಅವರ ಹೆಣಗಳನ್ನು ಎಡವುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕುದುರೆಗಳ ಮೇಲಿರುವ ಸೈನಿಕರು ಆಕ್ರಮಣವೆಸಗಿದ್ದಾರೆ. ಅವರ ಖಡ್ಗವು ಮಿಂಚುತ್ತದೆ. ಅವರ ಬರ್ಜಿಯು ಹೊಳೆಯುತ್ತದೆ, ಬಹು ಮಂದಿ ಸತ್ತಿರುತ್ತಾರೆ. ಶವಗಳ ರಾಶಿ ಬಿದ್ದಿವೆ, ಅವು ಲೆಕ್ಕವಿಲ್ಲದಷ್ಟು ಇವೆ. ಅವುಗಳ ಮೇಲೆ ಜನರು ಎಡವಿಬೀಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸವಾರರು ಹತ್ತುತ್ತಾರೆ, ಈಟಿಗಳು ಥಳಥಳಿಸುತ್ತವೆ, ಖಡ್ಗಗಳು ಮಿಂಚುತ್ತವೆ, ಹತರಾದವರು ಬಹಳ; ಹೆಣಗಳ ರಾಶಿ; ಅಸಂಖ್ಯಾತ ಮೃತ ದೇಹಗಳು, ಶವಗಳ ಮೇಲೆ ತತ್ತರಿಸುತ್ತಿರುವ ಜನರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:3
10 ತಿಳಿವುಗಳ ಹೋಲಿಕೆ  

ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.


ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.


ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ.


ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.


ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.


ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.


ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು