Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನಹೂಮ 3:7 - ಕನ್ನಡ ಸತ್ಯವೇದವು C.L. Bible (BSI)

7 ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ, ‘ನಿನವೆಯೂ ಹಾಳಾಯಿತಲ್ಲಾ, ಅದಕ್ಕಾಗಿ ಯಾರು ಗೋಳಾಡುವರು?’ ನಿನ್ನನ್ನು ಸಂತೈಸುವವರು ನನಗೆ ಎಲ್ಲಿ ಸಿಕ್ಕಾರು?” ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನನ್ನು ನೋಡುವ ಪ್ರತಿಯೊಬ್ಬನು ನಿನ್ನ ಕಡೆಯಿಂದ ಓಡಿಹೋಗಿ - ನಿನೆವೆಯೂ ಹಾಳಾಯಿತಲ್ಲಾ, ಯಾರು ಗೋಳಾಡಾರು, ನಿನ್ನನ್ನು ಸಂತೈಸತಕ್ಕವರು ನನಗೆ ಎಲ್ಲಿ ಸಿಕ್ಕಾರು ಅಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿನ್ನನ್ನು ನೋಡಿದವರೆಲ್ಲರು ದಂಗುಬಡಿಯಲ್ಪಡುವರು. ‘ನಿನೆವೆಯು ನಾಶವಾಯಿತು. ಆಕೆಗಾಗಿ ಯಾರು ಮರುಗುವರು?’ ಎಂದು ಜನರು ಹೇಳುವರು. ನಿನ್ನನ್ನು ಸಂತೈಸುವವರು ಯಾರೂ ಸಿಗುವುದಿಲ್ಲವಲ್ಲಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ನಹೂಮ 3:7
12 ತಿಳಿವುಗಳ ಹೋಲಿಕೆ  

“ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ : “ಅಯ್ಯೋ ! ಅಯ್ಯೋ ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.


ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.


ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:


ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.


ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು