Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 1:1 - ಕನ್ನಡ ಸತ್ಯವೇದವು C.L. Bible (BSI)

1 ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ ಮಾರ್ಗಶಿರ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹಕಲ್ಯನ ಮಗನಾದ ನೆಹೆಮೀಯನ ಚರಿತ್ರೆ: ಇಪ್ಪತ್ತನೆಯ ವರ್ಷದ ಮಾರ್ಗಶಿರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹಕಲ್ಯನ ಮಗನಾದ ನೆಹೆಮೀಯನ ಮಾತುಗಳು - ಇಪ್ಪತ್ತನೆಯ ವರುಷದ ಮಾರ್ಗಶೀರ್ಷ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇವು ನೆಹೆಮೀಯನ ಮಾತುಗಳು; ನೆಹೆಮೀಯನು ಹಕಲ್ಯನ ಮಗ. ಕಿಸ್ಲೇವ್ ತಿಂಗಳಿನಲ್ಲಿ ರಾಜಧಾನಿಯಾದ ಶೂಷನ್‌ನಲ್ಲಿ ನಾನು ಇದ್ದೆನು. ಅದು ಅರ್ತಷಸ್ತನ ಆಳ್ವಿಕೆಯ ಇಪ್ಪತ್ತನೆಯ ವರ್ಷವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 1:1
9 ತಿಳಿವುಗಳ ಹೋಲಿಕೆ  

ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.


ಸಹಿಮಾಡಿದವರು ಇವರು: ಹಕಲ್ಯನ ಮಗ ನೆಹೆಮೀಯನೆಂಬ ದೇಶಾಧಿಪತಿ;


ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.


ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.


ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.


ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು