Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:33 - ಕನ್ನಡ ಸತ್ಯವೇದವು C.L. Bible (BSI)

33 ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆ ಹಣವು ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯಧಾನ್ಯ ನೈವೇದ್ಯ ಇವುಗಳಿಗೋಸ್ಕರವೂ ನಿತ್ಯಸರ್ವಾಂಗಹೋಮ ಮತ್ತು ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲ್ಯರ ದೋಷಪರಿಹಾರಾರ್ಥವಾದ ಯಜ್ಞ ಇವುಗಳಿಗೋಸ್ಕರವೂ ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲಾ ಕೆಲಸಕ್ಕೋಸ್ಕರವೂ ವೆಚ್ಚವಾಗಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪ್ರತಿದಿನ ದೇವಾಲಯದೊಳಗೆ ಮೇಜಿನ ಮೇಲೆ ಇಡುವ ರೊಟ್ಟಿಗಳಿಗಾಗಿಯೂ ದಿನನಿತ್ಯದ ಸರ್ವಾಂಗಹೋಮಗಳಿಗೂ ಧಾನ್ಯಸರ್ಮರ್ಪಣೆಗೂ ಈ ಹಣವನ್ನು ಉಪಯೋಗಿಸಿರಿ. ಅಮಾವಾಸ್ಯೆ, ಸಬ್ಬತ್ ಮತ್ತು ಇತರ ವಿಶೇಷ ಸಭಾಕೂಟಗಳಲ್ಲಿ ಮಾಡುವ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ಇಸ್ರೇಲರನ್ನು ಶುದ್ಧರನ್ನಾಗಿ ಮಾಡುವ ಪವಿತ್ರ ಯಜ್ಞಗಳಿಗಾಗಿ ಮತ್ತು ಪಾಪಪರಿಹಾರಕ ಯಜ್ಞಗಳಿಗಾಗಿ ಈ ಹಣವನ್ನು ಉಪಯೋಗಿಸಿರಿ. ನಮ್ಮ ದೇವರ ಆಲಯದ ಯಾವ ಕಾರ್ಯಗಳಿಗೆ ಬೇಕಾದರೂ ಈ ಹಣವನ್ನು ಉಪಯೋಗಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:33
7 ತಿಳಿವುಗಳ ಹೋಲಿಕೆ  

ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.


ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.


ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.


ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು