Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:34 - ಕನ್ನಡ ಸತ್ಯವೇದವು C.L. Bible (BSI)

34 ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಧರ್ಮಶಾಸ್ತ್ರವಿಧಿಗಳಿಗೆ ಅನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿ ಉರಿಸುವುದಕ್ಕಾಗಿ, ಪ್ರತಿ ವರ್ಷವೂ ನಿಯಮಿತ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ, ಆಯಾ ಗೋತ್ರಾನುಸಾರ ಕಟ್ಟಿಗೆ ದಾನ ಮಾಡತಕ್ಕವರು ಇಂಥವರೇ ಎಂಬುದನ್ನು ಯಾಜಕರೂ, ಲೇವಿಯರೂ, ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟು ಹಾಕಿ ಗೊತ್ತುಮಾಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಧರ್ಮಶಾಸ್ತ್ರವಿಧಿಗನುಸಾರವಾಗಿ ನಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮೇಲೆ ಬೆಂಕಿಯುರಿಸುವದಕ್ಕಾಗಿ ವರುಷ ವರುಷ ನೇವಿುತವಾದ ಕಾಲಗಳಲ್ಲಿ ನಮ್ಮ ದೇವಾಲಯಕ್ಕೆ ಕಟ್ಟಿಗೆ ದೊರಕುವ ಹಾಗೆ ಆಯಾಗೋತ್ರಾನುಸಾರ ಕಾಷ್ಠದಾನ ಮಾಡತಕ್ಕವರು ಇಂಥವರು ಎಂಬದನ್ನು ಯಾಜಕರೂ ಲೇವಿಯರೂ ಸಾಧಾರಣ ಜನರೂ ಆಗಿರುವ ನಮ್ಮಲ್ಲಿ ಚೀಟುಹಾಕಿ ಗೊತ್ತುಮಾಡುತ್ತೇವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 “ನಾವು ಅಂದರೆ ಯಾಜಕರು, ಲೇವಿಯರು ಮತ್ತು ಇತರ ಜನರು ಒಟ್ಟಾಗಿ ಸೇರಿ ದೇವಾಲಯದಲ್ಲಿ ಯಜ್ಞ ಹೋಮಗಳನ್ನರ್ಪಿಸುವುದಕ್ಕೆ ಬೇಕಾದ ಕಟ್ಟಿಗೆಯನ್ನು ಪ್ರತಿಯೊಂದು ಕುಟುಂಬವು ವರ್ಷಕ್ಕೊಮ್ಮೆ ತಮಗೆ ನಿಗದಿತವಾದ ಸಮಯದಲ್ಲಿ ತಂದು ಒದಗಿಸುವುದಕ್ಕೆ ಚೀಟು ಹಾಕಿದೆವು. ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ನಾವು ಮಾಡಬೇಕಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:34
16 ತಿಳಿವುಗಳ ಹೋಲಿಕೆ  

ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.


ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.


ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.


ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.


ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;


ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.


ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.


ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.


“ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.


ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.


“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.


ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.


ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು