Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 10:37 - ಕನ್ನಡ ಸತ್ಯವೇದವು C.L. Bible (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕರಿಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವೆವು; ನಮ್ಮ ಭೂವಿುಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಪ್ರಥಮ ಫಲದ ಹಿಟ್ಟನ್ನು, ಪ್ರಥಮ ಫಲದ ಹಣ್ಣುಗಳನ್ನು, ಹೊಸ ದ್ರಾಕ್ಷಾರಸವನ್ನು, ಹೊಸ ಎಣ್ಣೆಯನ್ನು ಯಾಜಕರಿಗೋಸ್ಕರವಾಗಿ ದೇವಾಲಯದ ಉಗ್ರಾಣಗಳಲ್ಲಿ ತಂದಿಡುವೆವು. ನಮ್ಮ ಬೆಳೆಗಳಲ್ಲಿ ಹತ್ತನೆಯ ಒಂದು ಭಾಗವನ್ನು ಲೇವಿಯರಿಗೆ ತಂದುಕೊಡುವೆವು. ನಾವು ಕೆಲಸ ಮಾಡುತ್ತಿರುವ ಊರುಗಳಿಂದ ಲೇವಿಯರು ಇವುಗಳನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 10:37
23 ತಿಳಿವುಗಳ ಹೋಲಿಕೆ  

ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.


“ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.


ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.


ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.


ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.


ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.


ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.


ಜುದೇಯದ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನೂ ಕೊಟ್ಟದ್ದಲ್ಲದೆ, ದೇವರಾದ ಸರ್ವೇಶ್ವರನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಹಾಕಿದರು.


ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?


“ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.


ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.


“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.


ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.


“ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ಅವುಗಳ ಮಾಂಸ ಹಾಗೂ ನೈವೇದ್ಯವಾಗಿ ಆರತಿಯೆತ್ತುವ ಎದೆ ಮತ್ತು ಬಲತೊಡೆ ನಿನಗೆ ಸಲ್ಲಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು