Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:24 - ಕನ್ನಡ ಸತ್ಯವೇದವು C.L. Bible (BSI)

24 ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಈ ಲೇವಿಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಲೇವಿಯರಲ್ಲಿ ಇವರು ಮುಖಂಡರು: ಹಷಬ್ಯ, ಶೇರೇಬ್ಯ, ಕದ್ಮೀಯೇಲನ ಮಗನಾದ ಯೇಷೂವ ಮತ್ತು ಅವನ ಸಹೋದರರು. ಇವರು ತಮ್ಮ ಸಹೋದರರ ಎದುರು ನಿಂತು ಸ್ತೋತ್ರಗೀತೆ ಹಾಡುವರು. ಹೀಗೆ ಪರಸ್ಪರ ಹಾಡುವುದು ದೇವರ ಮನುಷ್ಯನಾದ ದಾವೀದನ ಆಜ್ಞೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:24
18 ತಿಳಿವುಗಳ ಹೋಲಿಕೆ  

ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.


ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಟಲುಗಳ ಮೇಲೆ ನಿಂತು, ಸ್ವರವೆತ್ತಿ ತಮ್ಮ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟರು.


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.


ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು