Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:30 - ಕನ್ನಡ ಸತ್ಯವೇದವು C.L. Bible (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ, ಊರುಬಾಗಿಲುಗಳನ್ನೂ, ಗೋಡೆಯನ್ನು ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಯಾಜಕರೂ ಲೇವಿಯರೂ ಶಾಸ್ತ್ರೋಕ್ತವಾಗಿ ತಮ್ಮನ್ನು ಶುದ್ಧಪಡಿಸಿಕೊಂಡರು. ಅನಂತರ ಜನರನ್ನೂ ಜೆರುಸಲೇಮಿನ ಗೋಡೆಯನ್ನೂ ಬಾಗಿಲುಗಳನ್ನೂ ಶಾಸ್ತ್ರೋಕ್ತವಾಗಿ ಶುದ್ಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:30
14 ತಿಳಿವುಗಳ ಹೋಲಿಕೆ  

ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.


“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.


ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.


ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.


ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.


ನಾನು ಈ ಪ್ರಕಾರ ಅನ್ಯವಾದ್ದನ್ನೆಲ್ಲಾ ತೆಗೆಸಿ, ಅವರನ್ನು ಶುದ್ದಪಡಿಸಿದೆ; ಯಾಜಕರಲ್ಲೂ ಪ್ರತಿಯೊಬ್ಬನಿಗಿದ್ದ ಕೆಲಸದ ವಿಷಯವಾಗಿ ಹಾಗು


ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”


ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.


ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.


ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.


ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.


ಆಗ ಯಾಜಕರೂ ಲೇವಿಯರೂ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ತಮ್ಮನ್ನೇ ಶುದ್ಧೀಕರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು