Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:44 - ಕನ್ನಡ ಸತ್ಯವೇದವು C.L. Bible (BSI)

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾದದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂವಿುಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗೋಸ್ಕರ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇವಿುಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಉಗ್ರಾಣಕ್ಕೆ ಮುಖ್ಯಸ್ತರನ್ನು ಆ ದಿನ ಆರಿಸಿದರು. ಜನರು ತಮ್ಮ ಪ್ರಥಮಫಲಗಳನ್ನು, ಪೈರಿನ ಹತ್ತನೆಯ ಒಂದಂಶವನ್ನು ತಂದರು. ಉಗ್ರಾಣದ ಮುಖ್ಯಸ್ತರು ಅವುಗಳನ್ನು ಕೋಣೆಯೊಳಗೆ ಶೇಖರಿಸಿಟ್ಟರು. ಎಲ್ಲರೂ ಅಚ್ಚುಕಟ್ಟಾಗಿ ತಮ್ಮತಮ್ಮ ಕೆಲಸಕಾರ್ಯಗಳನ್ನು ಮಾಡುವುದನ್ನು ನೋಡಿ ಜನರು ಸಂತೋಷಪಟ್ಟರು; ಹೆಚ್ಚಾದ ವಸ್ತುಗಳನ್ನು ಉಗ್ರಾಣದೊಳಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:44
17 ತಿಳಿವುಗಳ ಹೋಲಿಕೆ  

ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.


ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;


ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.


ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು.


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು