Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:47 - ಕನ್ನಡ ಸತ್ಯವೇದವು C.L. Bible (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲ್ಯರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಭಾಗಗಳನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಜೆರುಬ್ಬಾಬೆಲ್ ಮತ್ತು ನೆಹೆಮೀಯನ ಕಾಲದಲ್ಲಿ ಇಸ್ರೇಲರೆಲ್ಲರೂ ಗಾಯಕರಿಗೆ ಮತ್ತು ದ್ವಾರಪಾಲಕರಿಗೆ ಅನುದಿನ ಅಗತ್ಯವಾದವುಗಳನ್ನು ಒದಗಿಸಿಕೊಟ್ಟರು. ಇತರ ಲೇವಿಯರಿಗೋಸ್ಕರವಾಗಿಯೂ ಜನರು ಹಣವನ್ನು ಪ್ರತ್ಯೇಕವಾಗಿಟ್ಟರು. ಲೇವಿಯರೂ ಸಹ ಆರೋನನ ವಂಶದ ಯಾಜಕರಿಗಾಗಿ ಹಣವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:47
14 ತಿಳಿವುಗಳ ಹೋಲಿಕೆ  

ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.


ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - ಯಾಜಕ ಗೋತ್ರ ಮೆರಾಯ ಸೆರಾಯ ಹನನ್ಯ ಯೆರೆಮೀಯ ಮೆಷುಲ್ಲಾಮ್ ಎಜ್ರ ಯೆಹೋಹಾನಾನ್ ಅಮರ್ಯ ಯೋನಾತಾನ್ ಮಲ್ಲೂಕಿ ಜೋಸೇಫ್ ಶೆಬನ್ಯ ಅದ್ನ ಹಾರಿಮ ಹೆಲ್ಕೈ ಮೆರಾಯೋತ ಜಕರ್ಯ ಇದ್ದೋ ಮೆಷುಲ್ಲಾಮ್ ಗಿನ್ನೆತೋನ ಜೆಕ್ರೀ ಅಬೀಯ ಪಿಲ್ಟೈ ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ ಬಿಲ್ಗಾ ಯೆಹೋನಾತಾನ್ ಶೆಮಾಯ ಮತ್ತೆನೈ ಯೋಯಾರೀಬ ಉಜ್ಜೀ ಯೆದಾಯ ಕಲ್ಲೈ ಸಲ್ಲೈ ಏಬೆರ್ ಆಮೋಕ ಹಷಬ್ಯ ಹಿಲ್ಕೀಯ ನೆತನೇಲ್ ಯೆದಾಯ


ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ : ಯಾಜಕರು -


ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.


ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು